ವಿವಿಧ ಸಂಘಟನೆಗಳಿಂದ ಮಹಿಳಾ ಸಬಲೀಕರಣ, ಓಣಂ ಆಚರಣೆ

0

ಪುತ್ತೂರು: ಜಿಲ್ಲಾ ಮಹಿಳಾ ಮಂಡಳಗಳ ಒಕ್ಕೂಟ ಮಂಗಳೂರು, ತಾಲೂಕು ಮಹಿಳಾ ಮಂಡಲ ಒಕ್ಕೂಟ ಪುತ್ತೂರು, ಲಯನ್ಸ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಪದಗ್ರಹಣ, ಮಹಿಳಾ ಸಬಲೀಕರಣ ಮತ್ತು ಓಣಂ ಅನ್ನು ಇತ್ತೀಚೆಗೆ ಲಯನ್ಸ್ ಸೇವಾ ಮಂದಿರದಲ್ಲಿ ಆಚರಿಸಲಾಯಿತು.


ಲಯನ್ಸ್ ಅಧ್ಯಕ್ಷೆ ಲಯನ್ ಪ್ರೇಮಲತಾ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ ನೂತನ ಜಿಲ್ಲಾ ಅಧ್ಯಕ್ಷೆ ಉಷಾ ನಾಯಕ್ ರವರಿಗೆ ಅಧಿಕಾರ ಹಸ್ತಾಂತರಿಸಿ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮ ನಡೆಸಿಕೊಟ್ಟರು.

ಶಿಕ್ಷಕಿ ಶಾಂತ ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶಾಂತಿ ಹೆಗಡೆ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಲ್ಕಿ ತಾಲೂಕು ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು. ಇಂದಿರಾ, ಮಂಜುಳ, ಪ್ರೇಮರವರ ಪ್ರಾರ್ಥಿಸಿದರು. ಮೋಹಿನಿ ದಿವಾಕರ ಸ್ವಾಗತಿಸಿದರು. ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ ವಂದಿಸಿದರು. ಉಮಾಪ್ರಸನ್ನ ಕಾರ್ಯಕ್ರಮ ನಿರ್ವಹಿಸಿದರು. ನಂತರ ಓಣಂ ಅನ್ನು ಎಲ್ಲರು ಸೇರಿ ಆಚರಿಸಿದರು.

LEAVE A REPLY

Please enter your comment!
Please enter your name here