ಕೂರೇಲು ನೇಮೋತ್ಸವ, ಪೂರ್ವಭಾವಿ ಸಭೆ

0

ಪುತ್ತೂರು: ಆರ್ಯಾಪು ಗ್ರಾಮದ ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಶ್ರೀ ಮಲರಾಯ ಧರ್ಮದೈವಗಳ ನೇಮೋತ್ಸವದ ಬಗ್ಗೆ ಹಾಗೂ ಯಶಸ್ವಿಯಾಗಿ ನಡೆದ ಕೂರೇಲು ಶ್ರೀ ಮಲರಾಯ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಬ್ರಹ್ಮಕಲಶೋತ್ಸವದಲ್ಲಿ ಸೇವೆ ಮಾಡಿದ ಕರಸೇವಕರಿಗೆ, ಕೂರೇಲು ತರವಾಡು ಕುಟುಂಬಸ್ಥರಿಗೆ ಮತ್ತು ಬಂಧು ಮಿತ್ರರಿಗೆ ಕೃತಜ್ಞತೆ ಸಭೆ ಸೆ.29ರಂದು ಶ್ರೀ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಕೂರೇಲು ಕೆ.ಸಂಜೀವ ಪೂಜಾರಿಯವರ ಮನೆಯಲ್ಲಿ ನಡೆಯಿತು. ನ.19 ಮತ್ತು 20 ರಂದು ನಡೆಯುವ ಶ್ರೀ ಮಲರಾಯ ದೈವಗಳ ನೇಮೋತ್ಸವದ ಬಗ್ಗೆ ಈ ಸಂದರ್ಭದಲ್ಲಿ ವಿಷಯ ತಿಳಿಸಲಾಯಿತು. ಹಾಗೇ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದಲ್ಲಿ ಸಹಕಾರ ನೀಡಿದ ಕೂರೇಲು ಕುಟುಂಬಸ್ಥರಿಗೆ, ಬಂಧು ಮಿತ್ರರಿಗೆ ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದ ಸಂಜೀವ ಪೂಜಾರಿಯವರು ಶ್ರೀ ದೈವಗಳು ಎಲ್ಲರಿಗೂ ಒಳ್ಳೆಯದನ್ನು ಕರುಣಿಸಲಿ ಎಂದು ಹಾರೈಸಿದರು. ಸಭೆಯಲ್ಲಿ ಕೂರೇಲು ತರವಾಡು ಮನೆಯ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here