ಅ.2-12:ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಆಲಂಕಾರು: ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.2ರಿಂದ ಅ.12ರ ವಿಜಯದಶಮಿ ತನಕ ನವರಾತ್ರಿ ಉತ್ಸವ ನಡೆಯಲಿದೆ. ಅ. 2 ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಶ್ರೀ ಆದಿಶಕ್ತಿ ಭಜನಾ ಮಂಡಳಿ, ಶ್ರೀ ಕ್ಷೇತ್ರ ಶರವೂರು ಇವರಿಂದ ಭಜನೆ, ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ ಸಂತರ್ಪಣೆ ನಡೆಯಲಿದೆ.

ಅ.3ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಮಯೂರ ಸಾಂಸ್ಕೃತಿಕ ಕಲಾ ಕೇಂದ್ರ ಆಲಂಕಾರು ಇದರ ವಿದ್ಯಾರ್ಥಿಗಳಿಂದ ಭಕ್ತಿ ನೃತ್ಯಾರ್ಚನೆ, ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಅ. 4ರಂದು ಶುಕ್ರವಾರ ಬೆಳಿಗ್ಗೆ 8:00 ರಿಂದ ಸಾಮೂಹಿಕ ಚಂಡಿಕಾಯಾಗ ,ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಸಾಕ್ಷತ್ ಶಿವ ಸಾಂಸ್ಕೃತಿಕ ಕಲಾ ಕೇಂದ್ರ ಚಾರ್ವಾಕ ಇವರಿಂದ ಭಕ್ತಿ ಸಂಗೀತ,ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.


ಅ.5ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ,ಸಂಜೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ ಇವರಿಂದ ಪ್ರಾಯೋಜಕತ್ವ ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರು ಇವರಿಂದ ಯಕ್ಷಗಾನ ಗರುಡ ಗರ್ವಭಂಗ, ರಾತ್ರಿ ರಂಗಪೂಜೆ, ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.


ಅ. 6ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಭಾರತೀಯ ಕಲೆಗಳ ತರಬೇತಿ ಕೇಂದ್ರ ಕಡಬ ಇವರಿಂದ ನೃತ್ಯ ನಿನಾದ,
ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಅ. 7 ರಂದು ಸೋಮವಾರ ಲಲಿತಾ ಪಂಚಮಿ ದಿನದಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಯಕ್ಷಗಾನ ಪ್ರಸಂಗ , ರಾತ್ರಿ ಅಗ್ರಪೂಜೆ ಸಂಯೋಜನೆ ಯಕ್ಷಮಿತ್ರರು ಶರವೂರು – ಆಲಂಕಾರು ಇವರಿಂದ ಮಹಾಪೂಜೆ, ಗಣಪತಿ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ.

ಅ.8ರಂದು ಮಂಗಳವಾರ ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.ಸಂಜೆ ಭದ್ರಕಾಳಿ ಗುಡಿಯಲ್ಲಿ ರಂಗಪೂಜೆ,ಕಚೇರಿ ವಿದ್ವಾನ್ ಶ್ರೀ ಈಶ್ವರ ಭಟ್ಟರ ಶಿಷ್ಯೆಯರಿಂದ ಶಾಸ್ತ್ರೀಯ ಸಂಗೀತ , ರಾತ್ರಿ ಮಹಾಪೂಜೆ,ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.


ಅ. 9ರಂದು ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ,ಸಂಜೆ ನಾಟ್ಯರಾಧನಾ ನೃತ್ಯಾಲಯ ಇವರಿಂದ ನಿರ್ದೇಶನ ವಿದ್ವಾನ್ ಶ್ರೀ ರಾಘವೇಂದ್ರ ಪ್ರಸಾದ್ ಎ ಸಹಶಿಕ್ಷಕರು ಪೆರಾಬೆ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ.ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಅ. 10 ದುರ್ಗಾಷ್ಟಮಿಯಂದು ಬೆಳಿಗ್ಗೆ ಚಂಡಿಕಾ ಹೋಮ ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಮಹಿಳಾ ಯಕ್ಷಗಾನ ತಾಳಮದ್ದಳೆ ಯಕ್ಷಶ್ರೀ ಹವ್ಯಾಸಿ ಬಳಗ ಇವರಿಂದ ದುರ್ಗಾ ವಿಲಾಸ ಯಕ್ಷ ನಾಟ್ಯರ್ಥ ವೈಭವ ಸಾಂಸ್ಕೃತಿಕ ಕಾರ್ಯಕ್ರಮ. ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಅ.11 ರಂದು ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಮಾತೃಶ್ರೀ ಭಜನಾ ಮಂಡಳಿ ಕೊಂಡಾಡಿ ಕೊಪ್ಪ ಇವರಿಂದ ಭಜನೆ, ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ,ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ.


ಅ. 12 ರಂದು ವಿಜಯದಶಮಿ ಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ,ಅಕ್ಷರಾಭ್ಯಾಸ, ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ನವಾನ್ನ ಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿ, ಪ್ರಮುಖರಾದ ಹರೀಶ ಆಚಾರ್ಯ ನಗ್ರಿಗುತ್ತು,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆಗುತ್ತು, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರಿಪ್ರಸಾದ ಉಪಾಧ್ಯಾಯ, ರಾಧಾಕೃಷ್ಣ ರೈ ಪರಾರಿಗುತ್ತು, ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ವಿಠಲ ರೈ ,ವಾಸಪ್ಪ ಗೌಡ,ಮೋಹನ ಶರವೂರು, ಪುಷ್ಪಲತಾ ಕೆ,ರೋಹಿಣಿ ಬಿ.ಎನ್ ಗೌರವ ಸದಸ್ಯರಾದ ದಾಮೋದರ ಗೌಡ ಶರವೂರು, ಸೇರಿದಂತೆ ದೇವಸ್ಥಾನದ ಆರ್ಚಕರು,ಸಿಬ್ಬಂದಿ ವರ್ಗ, ಸೀಮೆಯ ಹತ್ತು ಸಮಸ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here