ಸರಸ್ವತಿ ಎಜುಕೇಶನ್ ಸೊಸೈಟಿಯ ಮಹಾಸಭೆ

0

ಪುತ್ತೂರು:ಸರಸ್ವತಿ ಎಜುಕೇಶನ್ ಸೊಸೈಟಿಯ ಮಹಾಸಭೆಯು ದರ್ಬೆಯ ಸಚ್ಚಿದಾನಂದ ಸೇವಾ ಸದನದಲ್ಲಿ ನಡೆಯಿತು .

ವರದಿಯನ್ನು ಪ್ರಧಾನ ಕಾರ್ಯದರ್ಶಿ ರಮೇಶ್ ಪ್ರಭು ಸಂಪ್ಯ ವಾಚಿಸಿದರು. ವಸಂತ ಶಂಕರ್ ಬಿ. 2023.24 ಸಾಲಿನ ಲೆಕ್ಕ ಪತ್ರಗಳನ್ನು ಸಭೆಗೆ ಮಂಡಿಸಿದರು.

ರಾಜಗೋಪಾಲ್ ಬಾಳೆಗುಳಿ ಅಧ್ಯಕ್ಷತೆ ವಹಿಸಿ‌ ಮಾತನಾಡಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳಿಗೆ ಸಂಪೂರ್ಣ ಸಹಕಾರ ಕೋರಿದರು .ವೇದಿಕೆಯಲ್ಲಿ ಗೌರವ ಸಲಹೆಗಾರ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ,ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯಕ್ ತೆಂಕಿಲ ಉಪಸ್ಥಿತರಿದ್ದರು.

ಶ್ರೀ ಸರಸ್ವತಿ ಮಹಿಳಾ ಮಂಡಳಿಯ ಅಧ್ಯಕ್ಷೆ ರಂಜಿತಾ ಪ್ರಭು ಪ್ರಾರ್ಥಿಸಿದರು .ಸೊಸೈಟಿಯ ನಿರ್ದೇಶಕ ಗೋಪಾಲಕೃಷ್ಣ ಪ್ರಭು ಕುಂಟಿನಿ ವಂದಿಸಿದರು.ಸೊಸೈಟಿಯ ನಿರ್ದೇಶಕ ಹರೀಶ್ ಬೋರ್ಕಾರ್ ಕತ್ತಲೆಕಾನ ಸ್ವಾಗತಿಸಿ ,ಕಾರ್ಯಕ್ರಮ ನಿರ್ವಹಿಸಿದರು .

LEAVE A REPLY

Please enter your comment!
Please enter your name here