ಕೊಂಬೆಟ್ಟು ವಿದ್ಯಾರ್ಥಿ ಮಹಮ್ಮದ್ ಶಹೀರ್ ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಸೆ.30ರಂದು ಮಂಗಳೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ 71 ಕೆ.ಜಿ ವಿಭಾಗದಲ್ಲಿ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಹೀರ್ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಎಸ್‌ಡಿಎಂ ವಿದ್ಯಾಸಂಸ್ಥೆ ವಾಮಂಜೂರು ಇವುಗಳ ಜಂಟಿ ಆಶ್ರಯದಲ್ಲಿ ಈ ಕುಸ್ತಿ ಪಂದ್ಯಾಟ ನಡೆದಿದೆ ಎಂದು ಶಾಲೆಯ ಉಪಪ್ರಾಂಶುಪಾಲ ವಸಂತ ಮೂಲ್ಯ ತಿಳಿಸಿದ್ದಾರೆ. ಶಹೀರ್ ಅವರು ಬನ್ನೂರು ಕರ್ಮಲ ನಿವಾಸಿ ಉಮ್ಮರ್ ಕೆ. ಸುಮಯ್ಯ ಬಾನು ದಂಪತಿ ಪುತ್ರ

LEAVE A REPLY

Please enter your comment!
Please enter your name here