ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಪುತ್ತೂರು ವತಿಯಿಂದ ಸರ್ವೆ ಕಲ್ಪಣೆ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಜನಜಾಗೃತಿ ವೇದಿಕೆಯ ಗ್ರಾಮಾಧ್ಯಕ್ಷ ಅಶೋಕ್ ರೈ ಸೊರಕೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.


ಸಂಪನ್ಮೂಲ ವ್ಯಕ್ತಿಯಾಗಿದ್ದ ಸವಣೂರು ಗ್ರಾ.ಪಂ ಸದಸ್ಯ ಗಿರಿಶಂಕರ್ ಸುಲಾಯ ಅವರು ದುಶ್ಚಟ, ಸ್ವಚ್ಛತೆ ಹಾಗೂ ಮಕ್ಕಳ ಭವಿಷ್ಯದ ವಿಚಾರವಾಗಿ ಮಾಹಿತಿ ನೀಡಿದರು. ಕೆಮ್ಮಿಂಜೆ ವಲಯ ಅಧ್ಯಕ್ಷರಾದ ಸುಂದರ ಬಲ್ಯಾಯ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಮುಖ್ಯ ಗುರು ಉಮೇರ ತಬಸ್ಸಂ ಶುಭ ಹಾರೈಸಿದರು. ಭಕ್ತಕೋಡಿ ಕಾರ್ಯಕ್ಷೇತ್ರದ ಚಿತ್ರ ಸ್ವಾಗತಿಸಿದರು. ಸೇವಾ ಪ್ರತಿನಿಧಿ ರೇಖಾ ಸಹಕರಿಸಿದರು. ವಲಯ ಮೇಲ್ವಾಚಾರಕಿ ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here