ಹನುಮಗಿರಿ ಶ್ರೀ ಗಜಾನನ  ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ,ಶಾಸ್ತ್ರಿ ಜಯಂತಿ

0

ಈಶ್ವರಮಂಗಲ: ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ  ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅ.2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು  ಆಚರಿಸಲಾಯಿತು.

ಶಾಲಾ ಪ್ರಾಂಶುಪಾಲ ಕೆ ಶಾಮಣ್ಣ ಮಾತನಾಡಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತ್ಯಾಗ ಬಲಿದಾನಗಳನ್ನು ಸ್ಮರಿಸುತ್ತಾ ಕಾರ್ಯಕ್ರಮಕ್ಕೆ ಶುಭ ನುಡಿದರು.

ಮುಖ್ಯ ಅತಿಥಿ ದೈಹಿಕ ಶಿಕ್ಷಕ ಪ್ರಶಾಂತ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಗಾಂಧೀಜಿಯವರು ಪಾಲಿಸಿದ ಸತ್ಯ ಶಾಂತಿಗಳು ಅವರನ್ನು ಪ್ರತ್ಯೇಕವಾಗಿ ಗುರುತಿಸುವಂತೆ ಮಾಡಿದೆ, ಈ ಸಂದರ್ಭದಲ್ಲಿ ಭಾರತದ ಸ್ವಚ್ಛತೆ ಹಾಗೂ ಆರೋಗ್ಯವನ್ನು ನೆನಪಿಸುತ್ತ ನಮ್ಮ ಸುತ್ತಲೂ ಸ್ವಚ್ಛತೆಯನ್ನು ಕಾಪಾಡೋಣ ಎಂದರು.

ಸಹ ಶಿಕ್ಷಕ ಉತ್ತಮ ಸ್ವಾಗತಿಸಿ ,ವಿದ್ಯಾರ್ಥಿನಿ ರಿಯಾ ಬಿನೋಯ್ ವಂದಿಸಿದರು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳು ,ಪೋಷಕರು ಮತ್ತು ಎಲ್ಲಾ ಶಿಕ್ಷಕರು ಉಪಸಿತರಿದ್ದರು. ವಿದ್ಯಾರ್ಥಿನಿಯರಾದ ತೃಪ್ತಿ ಹಾಗೂ ಸ್ನೇಹ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ವಠಾರ ಮತ್ತು ಹನುಮಗಿರಿ ವಠಾರವನ್ನು ಸ್ವಚ್ಛಗೊಳಿಸಿದರು.

LEAVE A REPLY

Please enter your comment!
Please enter your name here