ಪಾಲ್ತಾಡಿ : ಪರಿಸರ ಸ್ವಚ್ಛತಾ ಕಾರ್ಯಕ್ರಮ ಹಾಗೂ ಗಿಡನೆಡುವ ಕಾರ್ಯಕ್ರಮ

0

ಸವಣೂರು : ಭಾ.ಜ.ಪಾ. ಸುಳ್ಯ ಮಂಡಲ, ಎಸ್.ಟಿ.ಮೋರ್ಚಾ ಹಾಗೂ ಪಾಲ್ತಾಡಿ ಬೂತ್ 70 ರ ವತಿಯಿಂದ ಪಾಲ್ತಾಡಿ ಶಕ್ತಿ ಕೇಂದ್ರದ ಸಹಭಾಗಿತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ *ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಾಹದ ಹಾಗೂ ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಪರಿಸರ ಸ್ವಚ್ಛತಾ ಕಾರ್ಯಕ್ರಮ ಹಾಗೂ ಗಿಡನೆಡುವ ಕಾರ್ಯಕ್ರಮ ಪಾಲ್ತಾಡಿ ಗ್ರಾಮದ ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಅ.2ರಂದು ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ದಿನೇಶ್ ಮೆದು,ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಜಿಲ್ಲಾ ಎಸ್.ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂವಪ್ಪ ನಾಯ್ಕ ಆಲಂಕಾರು, ಸುಳ್ಯ ಮಂಡಲ ಎಸ್.ಟಿ.ಮೋರ್ಚಾ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಅಲಂಗಪ್ಪೆ, ಸದಸ್ಯ ಪುಟ್ಟಣ್ಣ ಸಿ.ಎಂ. ಅಂಕತಡ್ಕ, ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ  ಇಂದಿರಾ ಬಿ.ಕೆ., ಸವಣೂರು ಗ್ರಾ.ಪಂ.ಸದಸ್ಯರಾದ ಗಿರಿಶಂಕರ ಸುಲಾಯ, ತೀರ್ಥರಾಮ ಕೆಡೆಂಜಿ, ವಿನೋದಾ ರೈ,ಭರತ್ ರೈ, ಸವಣೂರು ಸಿಎ ಬ್ಯಾಂಕ್ ಅಧ್ಯಕ್ಷ  ತಾರಾನಾಥ ಕಾಯರ್ಗ,ಪಾಲ್ತಾಡಿ ಶಕ್ತಿ ಕೇಂದ್ರದ ಪ್ರಮುಖ್ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ, ಸವಣೂರು ಶಕ್ತಿ ಕೇಂದ್ರ ಪ್ರಮುಖ್ ಚೇತನ್ ಕೋಡಿಬೈಲು, ದಯಾನಂದ ಮೆದು, ಉಳ್ಳಾಕುಲು ದೈವಸ್ಥಾನದ ಕಾರ್ಯದರ್ಶಿ ದೀಕ್ಷಿತ್ ಜೈನ್ ಚೆನ್ನಾವರ, ಅಭ್ಯುದಯ ಯುವಕ ಮಂಡಲದ ಅಧ್ಯಕ್ಷ ಪುಟ್ಟಣ್ಣ ನಾಯ್ಕ,ಕಾರ್ಯದರ್ಶಿ ಧೀರಜ್ ರೈ ,ಸದಸ್ಯರಾದ ಪ್ರಜ್ವಲ್ ರೈ ,ಪ್ರಶಾಂತ ರೈ, ಹರ್ಷಿತ್ ,ದಿಲೀಪ್, ಪ್ರದೀಪ್, ಸುದೀಪ್,ಬೂತ್ 70 ರ ಅಧ್ಯಕ್ಷ ಸತೀಶ್ ಅಂಗಡಿಮೂಲೆ, ಕಾರ್ಯದರ್ಶಿ ಪ್ರವೀಣ್ ಕುಮಾರ್ ಮೊದಲಾದವರಿದ್ದರು.

ಈ ಸಂದರ್ಭದಲ್ಲಿ ಎಸ್.ಟಿ.ಮೋರ್ಚಾ ಸುಳ್ಯ ಮಂಡಲ ವತಿಯಿಂದ ಪ.ಪಂ.ದ ಕುಟುಂಬವೊಂದಕ್ಕೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.

LEAVE A REPLY

Please enter your comment!
Please enter your name here