ಅ.3: ಈಶ ವಿದ್ಯಾಲಯದಲ್ಲಿ ಶಾರದಾಪೂಜೆ, ಆಯುಧ ಪೂಜಾ ಕಾರ್ಯಕ್ರಮ

0

ಪುತ್ತೂರು: ಈಶ ಎಜ್ಯುಕೇಶನಲ್ ಆಂಡ್ ಸೋಶಿಯಲ್ ಸರ್ವಿಸ್ ಟ್ರಸ್ಟ್ ನೆಲ್ಲಿಕಟ್ಟೆ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಈಶ ವಿದ್ಯಾಲಯದಲ್ಲಿ 24ನೇ ವರ್ಷದ ಶಾರದಾ ಪೂಜೆ ಮತ್ತು ಆಯುಧ ಪೂಜಾ ಕಾರ್ಯಕ್ರಮವು ಅ.3ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದುರ್ಗಾದೇವಿಯ ಪ್ರಧಾನ ಆರ್ಚಕರಾದ ವೇದಮೂರ್ತಿ ಉದಯಕೃಷ್ಣ ಭಟ್ ಇವರ ಪೌರೋಹಿತ್ಯದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕವೃಂದ ಮತ್ತು ಶ್ರೀ ಮಹಾಲಿಂಗೇಶ್ವರ ಭಜನಾ ಸೇವಾ ಟ್ರಸ್ಟ್ (ರಿ) ಪುತ್ತೂರು ಸದಸ್ಯರಿಂದ ಭಜನಾ ಕಾರ್ಯಕ್ರಮ ಆ ಬಳಿಕ ಆಯುಧಪೂಜಾ, ವಾಹನ ಪೂಜಾ ಅನ್ನದಾನ ಸೇವೆ ನಡೆಯಲಿದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಹಿರಿಯ ಉಪನ್ಯಾಸಕ ವೃಂದದವರು ಹಾಗೂ ಈಶ ಸಂಸ್ಥೆಯ ಹಿತೈಷಿಗಳು ಆಗಮಿಸಬೇಕಾಗಿ ಸಂಸ್ಥೆಯ ಪ್ರಾಂಶುಪಾಲರಾದ ಗೋಪಾಲಕೃಷ್ಣ ಈಶ, ಉಪಪ್ರಾಂಶುಪಾಲರಾದ ಶ್ರೀಮತಿ ಶಾರದಾಕೃಷ್ಣರವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುತ್ತಾರೆ.

LEAVE A REPLY

Please enter your comment!
Please enter your name here