ಪುತ್ತೂರು ಶಾರದೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

0

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವದ ಪ್ರಯುಕ್ತ ಅ.3ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಂಡಿತು.


ಶಶಾಂಕ ಕೊಟೇಚಾರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಭಜನಾ ಮಂದಿರದ ಗೌರವಾಧ್ಯಕ್ಷ ಕೆದಂಬಾಡಿಗುತ್ತು ಸೀತಾರಾಮ ರೈ, ಮಂದಿರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ ಉರ್ಲಾಂಡಿ, ಸ್ಯಾಕ್ಸೋಫೋನ್ ವಾದಕ ಪಿ.ಕೆ. ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮದುಮಿತಾ ರಾವ್ ಪಡುಮಲೆ ಮತ್ತು ಬಳಗದವರಿಂದ ವೀಣಾ ವಾದನ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here