ಪುತ್ತೂರು ಶಾರದೋತ್ಸವ: 2ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ | ಶಾಸಕ ಅಶೋಕ್ ಕುಮಾರ್ ರೈಯವರಿಂದ ಚಾಲನೆ

0

ಪುತ್ತೂರು: ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ 90ನೇ ವರ್ಷದ ನವರಾತ್ರಿ ಉತ್ಸವ, ಪುತ್ತೂರು ಶಾರದೋತ್ಸವದ 2ನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಅ.4ರಂದು ಸಂಜೆ ನಡೆಯಿತು.

ಶಾಸಕ ಅಶೋಕ್‌ಕುಮಾರ್ ರೈ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅಶೋಕ್‌ಕುಮಾರ್ ರೈಯವರಿಗೆ ‘ಅಕ್ಷರ ಯಜ್ಞ’ ಪುಸ್ತಕವನ್ನು ಭಜನಾ ಮಂದಿರದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ನೀಡಿದರು.

ಕಾರ್ಯಕ್ರಮದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಪಂಜಿಗುಡ್ಡೆ ಈಶ್ವರ್ ಭಟ್, ನಿಹಾಲ್ ಶೆಟ್ಟಿ, ಭಾಸ್ಕರ್ ಬಾರ್ಯ, ಪ್ರಧಾನ ಕಾರ್ಯದರ್ಶಿ ಜಯಂತ ಉರ್ಲಾಂಡಿ, ಉಪಾಧ್ಯಕ್ಷ ಯಶವಂತ ಆಚಾರ್ಯ, ಕೋಶಾಧಿಕಾರಿ ತಾರನಾಥ್, ಶೋಭಾಯಾತ್ರೆ ಸಂಚಾಲಕ ನವೀನ್‌ಕುಲಾಲ್, ನಾ. ಕಾರಂತ ಪೆರಾಜೆ, ಮಹಾಲಿಂಗೇಶ್ವರ ದೇವಸ್ಥಾನದ ನಿತ್ಯಕರಸೇವಕರ ತಂಡದ ಸದಸ್ಯರು ಉಪಸ್ಥಿತರಿದ್ದರು.


ಸಂಜೆ ಕುಶಾಲ ಹಾಸ್ಯ ಬಳಗ ಪುತ್ತೂರು ಇವರಿಂದ ಹಾಸ್ಯಸಂಜೆ, ಬೊಳುವಾರು ಆಂಜನೇಯ ಯಕ್ಷಗಾನ ಕಲಾ ಸಂಘ ಇವರಿಂದ ಗರುಡ ಗರ್ವ ಭಂಗ ಎಂದು ಯಕ್ಷಗಾನ ತಾಳಮದ್ದಳೆ ನಡೆಯಿತು.

LEAVE A REPLY

Please enter your comment!
Please enter your name here