ರಾಮನಗರದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯಿಂದ ನಿವೃತ ಯೋಧ ಸತೀಶ ಪಲ್ಲೆಜಾಲು ಅವರಿಗೆ ಸ್ವಾಗತ

0

ಉಪ್ಪಿನಂಗಡಿ: ಭಾರತೀಯ ಸೇನೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯನ್ನು ಪಡೆದು ಅ.4ರಂದು ಹುಟ್ಟೂರಿಗೆ ಆಗಮಿಸಿದ ಯೋಧ ಹಿರೇಬಂಡಾಡಿ ಗ್ರಾಮದ ಸತೀಶ ಪಲ್ಲೆಜಾಲು ಅವರಿಗೆ ರಾಮನಗರದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ವತಿಯಿಂದ ಗೌರವಿಸಿ, ಸ್ವಾಗತ ನೀಡಲಾಯಿತು.


ಈ ಸಂದರ್ಭ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ್ ಶೆಣೈ, ಅಧ್ಯಕ್ಷ ಚಂದ್ರಶೇಖರ ಮಡಿವಾಳ, ಕಾರ್ಯದರ್ಶಿ ದೀಪಕ್ ಪೈ ಯು., ಕೋಶಾಧಿಕಾರಿ ಕಂಗ್ವೆ ವಿಶ್ವನಾಥ ಶೆಟ್ಟಿ, ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ಧನಂಜಯ ನಟ್ಟಿಬೈಲು, ಉಪ್ಪಿನಂಗಡಿ ಸಿಎ ಬ್ಯಾಂಕ್ ನಿರ್ದೇಶಕಿ ಶ್ಯಾಮಲಾ ಶೆಣೈ ಎನ್., ರವಿನಂದನ್ ನಟ್ಟಿಬೈಲು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here