ಅ.28: ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ಚುನಾವಣೆ

0

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಪುತ್ತೂರು ತಾಲೂಕು ಕಾರ್ಯಕಾರಿ ಸಮಿತಿ ಚುನಾವಣೆ ಅ.28ರ ಸೋಮವಾರ ಬೆಳಿಗ್ಗೆ 9ರಿಂದ ಸಂಜೆ 4ರ ವರೆಗೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿ ನಿವೃತ್ತ ಉಪ ತಹಶಿಲ್ದಾರ್ ಆಗಿರುವ ಸೂರಪ್ಪ ಗೌಡರವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ 2024-29ನೇ ಸಾಲಿಗೆ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದ್ದು ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಅ.9ರಿಂದ 18ರ ಸಂಜೆ 5ರ ತನಕ ನಾಮಪತ್ರಗಳನ್ನು ವಿತರಣೆ ಮಾಡಲಾಗುವುದು. ಅ.18ರ ಶುಕ್ರವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನಾಮಪತ್ರ ಪರಿಶೀಲನೆಯು ಅ.19ರಂದು ನಡೆಯಲಿದ್ದು, ಅ.28ರಂದು ಚುನಾವಣೆ ನಡೆಯಲಿದೆ. ಬಳಿಕ ಸಂಜೆಯೇ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾ ಅಧಿಕಾರಿ ಸೂರಪ್ಪ ಗೌಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here