ಯಕ್ಷಗಾನ ಅರ್ಥದಾರಿ ಗುಡ್ಡಪ್ಪ ಬಲ್ಯರಿಗೆ ಸನ್ಮಾನ

0

ಉಪ್ಪಿನಂಗಡಿ: ಇಲ್ಲಿನ ರಾಮನಗರದ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ 30ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮದಲ್ಲಿ ರಾಮನಗರದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸಕ, ಯಕ್ಷಗಾನ ಅರ್ಥದಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.


ಸೌಹಾರ್ದ ಯಕ್ಷಗಾನ ಸಮಿತಿಯ ಅಧ್ಯಕ್ಷ ಉಮೇಶ ಶೆಣೈ ಎನ್., ಶಾರದೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ರಾಮಚಂದ್ರ ಮಣಿಯಾಣಿ, ಅಧ್ಯಕ್ಷ ಚಂದ್ರಶೇಖರ ಮಡಿವಾಳ,
ಖಜಾಂಚಿ ಕಂಗ್ವೆ ವಿಶ್ವನಾಥ ಶೆಟ್ಟಿ, ಕಾರ್ಯದರ್ಶಿ ದೀಪಕ್ ಪೈ, ಜೊತೆ ಕಾರ್ಯದರ್ಶಿ ಗಣೇಶ್ ಭಂಡಾರಿ, ನಿವೃತ್ತ ಯೋಧ ವಿಶ್ವನಾಥ ಶೆಣೈ, ಹಿರೇಬಂಡಾಡಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ಶ್ರೀಧರ ಭಟ್, ಜಯಂತ ಪೊರೋಳಿ, ಹರಿರಾಮಚಂದ್ರ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.


ಕಲಾವಿದ ಹರೀಶ್ ಆಚಾರ್ಯ ಬಾರ್ಯ ಅಭಿನಂದನಾ ನುಡಿಗನ್ನಾಡಿದರು. ನಿವೃತ್ತ ಉಪನ್ಯಾಸಕ ಮಹಾಲಿಂಗೇಶ್ವರ ಭಟ್ ಪೆರಿಯಡ್ಕ ಸನ್ಮಾನ ಪತ್ರ ವಾಚಿಸಿದರು. ಕಾಳಿಕಾಂಬ ಯಕ್ಷಗಾನ ಸಂಘದ ಕಾರ್ಯದರ್ಶಿ ಶ್ರೀಪತಿ ಭಟ್ ಸ್ವಾಗತಿಸಿ, ಉಪಾಧ್ಯಕ್ಷ ಸಂಜೀವ ಪಾರೆಂಕಿ ವಂದಿಸಿದರು. ಸೌಹಾರ್ದ ಯಕ್ಷಗಾನ ಸಮಿತಿಯ ಸಂಚಾಲಕ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here