ಜಿಲ್ಲಾ ಮಟ್ಟದ ಜ್ಞಾನ-ವಿಜ್ಞಾನ ಸ್ಪರ್ಧಾ ಮೇಳ-ನರಿಮೊಗರು ಸಾಂದೀಪನಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಅಖಿಲ ಭಾರತೀಯ ವಿದ್ಯಾಭಾರತಿ ಕರ್ನಾಟಕ ಹಾಗೂ ಸಾಂದೀಪನಿ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಅ.14ರಂದು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಸಾಂದೀಪನಿ ವಿದ್ಯಾರ್ಥಿಗಳಾದ ವಾಹಿನ್ ರೈ 9ನೇ ತರಗತಿ (ರಾಕೇಶ್ ರೈ ಕೆಡೆಂಜಿ ಮತ್ತು ದೀಪ್ತಿ ಆರ್ ರೈ ಸುಪುತ್ರ), ಗಣಿತ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಮತ್ತು
ಅಜಿತೇಶ್ ಜೆ. ಎನ್ 9ನೇ ತರಗತಿ (ಜತ್ತಪ್ಪ ಗೌಡ ಮತ್ತು ಬೇಬಿ ರೇಖಾ, ನೈತ್ತಾಡಿ ಇವರ ಸುಪುತ್ರ) ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲಾ ಸಂಚಾಲಕರಾದ ಭಾಸ್ಕರ್ ಆಚಾರ್ ಹಿಂದಾರ್ ಹಾಗೂ ಶಾಲಾ ಮುಖ್ಯಗುರುಗಳಾದ ಜಯಮಾಲಾ ವಿ ಎನ್ ರವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here