ಮೂಡಬಿದಿರೆಯಲ್ಲಿ ನಡೆಯುವ ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-ಶಾಸಕರಿಗೆ ಆಮಂತ್ರಣ ಪತ್ರಿಕೆ ವಿತರಣೆ

0

ಪುತ್ತೂರು: ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನವೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾಗವಹಿಸುವ ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024 ಇದರ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈರವರಿಗೆ ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಪುತ್ತೂರು ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಶಾಸಕರ ಟ್ರಸ್ಟ್ ಕಚೇರಿಯಲ್ಲಿ ವಿತರಿಸಿ ಗೌರವ ಪೂರ್ವಕವಾಗಿ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಪೂವಪ್ಪ ನಾಯ್ಕ ಕಾವು, ಪ್ರಧಾನ ಕಾರ್ಯದರ್ಶಿಗಳಾದ ಶೀನಪ್ಪ ನಾಯ್ಕ ನೆಲ್ಯಾಡಿ, ಮಾಜಿ ಅಧ್ಯಕ್ಷ ಸುಂದರ ನಾಯ್ಕ ಕೆ.,ಮಾಜಿ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು, ಪರಮೇಶ್ವರ ನಾಯ್ಕ ಪಾಂಗ್ಲಾಯಿ, ಕರುಣಾಕರ ನಾಯ್ಕ ಪಾಂಗಲಾಯಿ, ರಾಮಚಂದ್ರ ನಾಯ್ಕ ಕೇಪುಳು. ವೆಂಕಪ್ಪ ನಾಯ್ಕ ನೆಹರೂನಗರ, ಪಂಚಾಯತ್ ಸದಸ್ಯರಾದ ಶೀನಪ್ಪ ನಾಯ್ಕ, ವಿಮಲ ನಾಯ್ಕ, ವಿನುತ, ಮಹಿಳಾ ಘಟಕದ ಕಾರ್ಯದರ್ಶಿ ವಸಂತಿ ಪಿ.ಕೆ, ವೀಣಾ ದೇವಪ್ಪ ನಾಯ್ಕ. ವಿಠಲ ನಾಯ್ಕ ಅರಿಯಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here