ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹ – ಡಿವೈಎಸ್ಪಿ ಕಚೇರಿ ಮುಂದೆ ಭಜನೆ ಮೂಲಕ‌ ಹಿಂಜಾವೇ ಪ್ರತಿಭಟನೆ

0

ಪುತ್ತೂರು: ಒಂದು ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಾಕಾರಿ ಪದ ಬಳಕೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಾಣಿಯೂರಿನ ಸಂಜೀವ ಪೂಜಾರಿ ಬಂಧನಕ್ಕೆ ಆಗ್ರಹಿಸಿ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ಪುತ್ತೂರು ಡಿವೈಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಇಂದು ಸಂಜೆಯೊಳಗಾಗಿ ಸಂಜೀವ ಪೂಜಾರಿಯವರನ್ನು ಬಂಧಿಸುವುದಾಗಿ ಪ್ರತಿಭಟನಾ ನಿರತರಿಗೆ ಡಿವೈಎಸ್‌ ಪಿ ಭರವಸೆ ನೀಡಿದ್ದರು. ಆದರೆ ಸಂಜೆಯವರೆಗೆ ಕಾಯದೆ ಸಂಜೀವ ಪೂಜಾರಿಯವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನಾ ನಿರತರು ಭಜನೆಯೊಂದಿಗೆ ಪ್ರತಿಭಟನೆ ಮುಂದುವರಿಸಿದೆ.

LEAVE A REPLY

Please enter your comment!
Please enter your name here