ಅ.20: ನಿವೃತ್ತ ಶಿಕ್ಷಕ ಶ್ರೀನಿವಾಸ್ ಹೆಚ್.ಬಿ ಹುಟ್ಟು ಹಬ್ಬದ ಪ್ರಯುಕ್ತ ಗುರು ಶಿಷ್ಯ ಸಮ್ಮಿಲನ

0

ಪುತ್ತೂರು: ಸರ್ವೆ ಎಸ್‌ಜಿಎಂ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು, ಬೊಳುವಾರು ಶ್ರೀ ರಕ್ಷಾ ಕಲಾ ಕೇಂದ್ರದ ಸಂಸ್ಥಾಪಕರೂ ಆಗಿರುವ ಶ್ರೀನಿವಾಸ್ ಹೆಚ್.ಬಿ ಅವರ 64ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಗುರು ಶಿಷ್ಯರ ಸಮ್ಮಿಲನ, ಹಿರಿಯ ವಿದ್ಯಾರ್ಥಿ ದಿನಾಚರಣೆ ನಡೆಯಲಿದ್ದು ಅ.20ರಂದು ಕೊಡಗು ಜಿಲ್ಲೆಗೆ ಪ್ರವಾಸ ಆಯೋಜಿಸಲಾಗಿದೆ.

ಶ್ರೀನಿವಾಸ್ ಹೆಚ್.ಬಿ ಅವರು ಶಿಕ್ಷಕ ವೃತ್ತಿಯಿಂದ ನಿವೃತ್ತರಾದ ಬಳಿಕ ಪ್ರತೀ ವರ್ಷ ಅವರ ಹುಟ್ಟಿದ ದಿನದಂದು ಗುರು ಶಿಷ್ಯ ಸಮ್ಮಿಲನ ನಡೆಯುತ್ತಿದ್ದು, ಹಿರಿಯ ವಿದ್ಯಾರ್ಥಿಗಳ ಪ್ರವಾಸ ಹಾಗೂ ಸಾಧಕ ಹಿರಿಯ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯ ನಡೆಸಲಾಗುತ್ತಿದೆ. ಈ ಬಾರಿ ಕೊಡಗು ಜಿಲ್ಲೆಗೆ ಪ್ರವಾಸ ಆಯೋಜನೆ ಮಾಡಲಾಗಿದ್ದು ಮಡಿಕೇರಿಯ ಕ್ಯಾಪಿಟಲ್ ವಿಲೇಜ್ ರೆಸೋರ್ಟ್‌ನಲ್ಲಿ ಹುಟ್ಟು ಹಬ್ಬ ಸಂಭ್ರಮ ಮತ್ತು ಸಾಧಕ ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ‘ಜನ ಮೆಚ್ಚಿದ ಶಿಕ್ಷಕ’ ಖ್ಯಾತಿಯ ಶ್ರೀನಿವಾಸ್ ಹೆಚ್.ಬಿ ಅವರು ಶಿಕ್ಷಕ ವೃತ್ತಿಯಿಂದ ನಿವೃತ್ತರಾದ ಬಳಿಕವೂ ಹಿರಿಯ ವಿದ್ಯಾರ್ಥಿಗಳೊಂದಿಗೆ ಆತ್ಮೀಯತೆ ಹೊಂದಿದ್ದು ನಿರಂತರ ಸಂಪರ್ಕದಲ್ಲಿದ್ದಾರೆ. ಹಿರಿಯ ವಿದ್ಯಾರ್ಥಿಗಳೂ ತಮ್ಮ ಅಚ್ಚುಮೆಚ್ಚಿನ ಶಿಕ್ಷಕನೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತೀ ವರ್ಷ ಅವರ ಹುಟ್ಟು ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here