ಪೆರುವಾಜೆ: ವಿಧಾನ ಪರಿಷತ್ ಉಪಚುನಾವಣೆ – ಬಿಜೆಪಿ ಚುನಾವಣಾ ಪ್ರಚಾರ ಸಭೆ

0

ಬೆಳ್ಳಾರೆ : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರ ವಿಧಾನ ಪರಿಷತ್ ಉಪ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಮಂಡಲ ಬಿಜೆಪಿ ವತಿಯಿಂದ ಚುನಾವಣಾ ಪ್ರಚಾರ ಸಭೆ ಅ.18ರಂದು ಪೆರುವಾಜೆ ಜೆ.ಡಿ.ಆಡಿಟೋರಿಯಂನಲ್ಲಿ ನಡೆಯಿತು.

ಮಾಜಿ ಸಚಿವ ,ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ದ.ಕ.ಸಂಸದ ಕ್ಯಾ.ಬೃಜೇಶ್ ಚೌಟ, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ದಯಾಕರ ಆಳ್ವ, ಚುನಾವಣಾ ಸಹ ಸಂಚಾಲಕ ರಾಕೇಶ್ ರೈ ಕೆಡೆಂಜಿ, ಮಾಜಿ ಎಸ್.ಅಂಗಾರ, ರಾಜ್ಯ ಸಮಿತಿ ಸದಸ್ಯರಾದ ಕೃಷ್ಣ ಶೆಟ್ಟಿ, ಎ.ವಿ.ತೀರ್ಥರಾಮ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಅರುವಾರ, ಪ್ರೇಮಾನಂದ ಶೆಟ್ಟಿ, ಪ್ರವಾಸ ಪ್ರಮುಖ್ ದೇವದಾಸ್ ಶೆಟ್ಟಿ, ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಉಪಸ್ಥಿತರಿದ್ದರು.

ಜಿ.ಪಂ.ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ವಂದೇ ಮಾತರಂ ಹಾಡಿದರು. ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸ್ವಾಗತಿಸಿದರು. ವಿ.ಪ.ಚುನಾವಣೆಯ ಸುಳ್ಯ ಮಂಡಲ ಸಂಚಾಲಕ ವಿಜಯ ಕುಮಾರ್ ವಂದಿಸಿದರು. ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ನಿರೂಪಿಸಿದರು.

LEAVE A REPLY

Please enter your comment!
Please enter your name here