ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಜಾಮೀನಿನ ಮೇಲೆ ಬಿಡುಗಡೆ

0

ಪುತ್ತೂರು: ಹಿಂದೂ ಹೆಣ್ಣು ಮಕ್ಕಳ ಕುರಿತು ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಕಲಂ 79 ಬಿಎನ್‌ ಎಸ್‌ -2023 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಪುತ್ತೂರು ಡಿವೈಎಸ್ಪಿ ಕಚೇರಿ ಎದುರು ಹಿಂಜಾವೇ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪೊಲೀಸರು ಸಂಜೀವ ಪೂಜಾರಿ ಅವರನ್ನು ಅವರ ಮನೆಯಿಂದಲೇ ಬಂಧಿಸಿ ಕರೆದೊಯ್ದರು.

ಪೊಲೀಸರು ವಿಚಾರಣೆ ನಡೆಸಿ ಅವರನ್ನು ನ್ಯಾಯಧೀಶರೆದುರು ಹಾಜರುಪಡಿಸಿದರು. ನ್ಯಾಯಾಧೀಶರು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಆದೇಶಿಸಿದರು.

LEAVE A REPLY

Please enter your comment!
Please enter your name here