ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರನ್ನು ಭಕ್ತಿಯಿಂದ ಆರಾಧಿಸುವ ನಿಟ್ಟಿನಲ್ಲಿ ಕನ್ನಡದಲ್ಲೂ ಪದವರ್ಣದ ಮೂಲಕ ಶ್ರೀ ಮಹಾಲಿಂಗೇಶ್ವರ ದೇವರ ಸ್ಥಳ ಪುರಾಣವನ್ನು ಸ್ತುತಿಸುವ ಮೊದಲ ಪ್ರಯೋಗ ಇತ್ತೀಚೆಗೆ ಪುತ್ತೂರಿನಲ್ಲಿ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಕಲಾದೀಪ ಖ್ಯಾತಿಯ ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಅವರು ಯುಗಳ ನೃತ್ಯ ಮೂಲಕ ಪ್ರದರ್ಶನ ನೀಡಿದರು. ಈ ಪ್ರದರ್ಶನದ ಚಿತ್ರ ವಿವರಣೆ ನೀಡಲಾಗಿದೆ.






