ರಾಮಕುಂಜ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇದರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಲಭಿಸಿದೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಪಿ.ಬಬಿತ್ ಕುಮಾರ್ ಮಿಮಿಕ್ರಿ ಪ್ರಥಮ, ಯಜ್ಞ ರಂಗೋಲಿ ಪ್ರಥಮ, ಸಿಂಚನ ಕನ್ನಡ ಭಾಷಣ ಪ್ರಥಮ, ಪ್ರಣಮ್ಯ ಎಚ್.ಕೆ., ಸಂಸ್ಕೃತ ಭಾಷಣ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಜ್ಯೋತಿ ಹಿಂದಿ ಭಾಷಣದಲ್ಲಿ ತೃತೀಯ ಹಾಗೂ ಅಭಿದೀಕ್ಷಾ ಕನ್ನಡ ಪ್ರಬಂಧದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಪ್ರಸ್ತುತ ವರ್ಷದ ಸಾಂಸ್ಕೃತಿಕ ತಂಡದ ನೇತೃತ್ವವನ್ನು ಶಾಲಾ ಹಿರಿಯ ಶಿಕ್ಷಕಿ ಪುಷ್ಪಾವತಿಯವರು ವಹಿಸಿದ್ದರು. ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯಗುರು ಸತೀಶ್ ಭಟ್ ಮಾರ್ಗದರ್ಶನದಲ್ಲಿ ಶಾಲಾ ಶಿಕ್ಷಕರು ತರಬೇತಿ ನೀಡಿದ್ದರು.