ಪುತ್ತೂರು: ಬಿಎಂಎಸ್ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ನಗರಸಭಾ ಸದಸ್ಯರಾದ ಬಿ ಎಂ ಎಸ್ ಆಟೋ ರಿಕ್ಷಾ ಸಂಘದ ಸದಸ್ಯ ಮನೋಹರ ಕಲ್ಲಾರೆ ಅವರು ಧ್ವಜಾರೋಹಣ ನೆರವೇರಿಸಿದರು.
ಸಂಘದ ಅಧ್ಯಕ್ಷ ರಾಜೇಶ್ ಮರೀಲ್ ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಎಂಎಸ್ ಆಟೋ ರಿಕ್ಷಾ ಚಾಲಕ ಮಾಲಕರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಸುಧಾಕರ್ ನಾಯಕ್. ಸಂಘದ ಮಾಜಿ ಅಧ್ಯಕ್ಷರಾದ ದೇವಪ್ಪ ಗೌಡ. ಜೀ ಹುಸೇನ್ ರವರು ಉಪಸ್ಥಿತರಿದ್ದರು. ಸಂಘದ ಮಾಜಿ ಅಧ್ಯಕ್ಷ ಸತೀಶ್ ಪ್ರಭು ಮಣಿಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮಾಜಿ ಅಧ್ಯಕ್ಷರು ಗೌರವ ಸಲಹೆಗಾರರು ಆದ ಹುಸೇನ್ ರವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.