ಕಡಬ: ಕಡಬ ತಾಲೂಕಿನ ಎಡಮಂಗಲ ಗ್ರಾಮದ ಮಾಲೇಂಗ್ರಿ ನಿವಾಸಿ, ಪ್ರಗತಿಪರ ಕೃಷಿಕ ಕಿಟ್ಟಣ್ಣ ರೈ (76ವ.)ರವರು ಅಲ್ಪಕಾಲದ ಅಸೌಖ್ಯದಿಂದ ಜ.31ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ಕುಸುಮಾವತಿ ರೈ, ಪುತ್ರರಾದ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಕಡಬ ಶಾಖಾ ವ್ಯವಸ್ಥಾಪಕ ವಿಜಯಕುಮಾರ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳ್ಳಾರೆ ಶಾಖೆಯ ಸಿಬ್ಬಂದಿ ಪ್ರಸಾದ್ ಕುಮಾರ್ ರೈ, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.