ಕಡಬ ತಾ.೪ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ’ಅಕ್ಷರ ತೇರು’ ಬಿಡುಗಡೆ

0

ರಾಮಕುಂಜ: ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗಾಗಿ ಹೊರತಂದಿರುವ ಸ್ಮರಣ ಸಂಚಯ ’ಅಕ್ಷರ ತೇರು’ ಇದರ ಬಿಡುಗಡೆ ಸಮಾರಂಭ ಫೆ.1ರಂದು ಶ್ರೀ ರಾಮಕುಂಜೇಶ್ವರ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು.


ಅಧ್ಯಕ್ಷತೆ ವಹಿಸಿದ್ದ ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ಅವರು ಮಾತನಾಡಿ, ಕುಂತೂರುಪದವು ಸಂತಜಾರ್ಜ್ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿದ್ದು, ಇದರ ನೆನಪಿನ ಬುತ್ತಿಯ ಅನಾವರಣ ತುಂಬ ಸಂತಸ ನೀಡಿದೆ. ಸ್ಮರಣ ಸಂಚಯ ಅಂದವಾಗಿ ಮೂಡಿಬರಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಡಬ ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಕಡಬ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಸದಸ್ಯರಾದ ವೆಂಕಟರಮಣ ನೆಲ್ಯಾಡಿ, ಗ್ರೇಸಿಪಿಂಟೋ ಕಡಬ, ಪ್ರೇಮ ಬಿ., ಪುಷ್ಪಾವತಿ ಹಾಗೂ ಪದಾಧಿಕಾರಿಗಳು, ತಾಲೂಕಿನ ಕನ್ನಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ ಸ್ವಾಗತಿಸಿ, ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತಾಯ ವಂದಿಸಿದರು

LEAVE A REPLY

Please enter your comment!
Please enter your name here