ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ ಕಂಪೌಂಡರ್ ನರಸಿಂಹ ಭಟ್ ಅಸ್ತಂಗತ 

0

ಪುತ್ತೂರು: ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82ವ)ಅವರು ಫೆ.3 ರ ರಾತ್ರಿ ಅಸ್ತಂಗತರಾಗಿದ್ದಾರೆ.

ತನ್ನ 16ನೇ ವಯಸ್ಸಿನಿಂದ ಪುತ್ತೂರಿನ ಚಿಕಿತ್ಸಾಲಯವೊಂದರಲ್ಲಿ ಕಾಂಪೌಂಡರ್ ಆಗಿ 68 ವರ್ಷ ಸೇವೆ ಸಲ್ಲಿಸಿದ ನರಸಿಂಹ ಭಟ್ ಅವರು ನಿವೃತ್ತಿಗೊಂಡು ಮನೆಯಲ್ಲಿದ್ದರು. ಮೃತರು ಪತ್ನಿ ಕಾವೇರಮ್ಮ, ಪುತ್ರ ವಿದೇಶದಲ್ಲಿರುವ ಕಾರ್ತಿಕ್, ಇಬ್ಬರು ಸಹೋದರರನ್ನು ಅಗಲಿದ್ದಾರೆ.

ಡಾ.ಶಿವರಾಮ ಭಟ್ ಜೊತೆ ಕಂಪೌಂಡರ್ ಆಗಿ ಕೆಲಸ ಮಾಡಿದ ನರಸಿಂಹ ಭಟ್ ಅವರು ಎಲ್ಲರಿಗೂ ಚಿರಪರಿಚಿತರು. ವೈದ್ಯಕೀಯ ಚಿಕಿತ್ಸೆಯ ಜೊತೆಯಲ್ಲಿ ಆತ್ಮೀಯವಾಗಿ ಮಾತನಾಡುವ ಮೂಲಕ ರೋಗಿಯಲ್ಲಿ ನವಚೇತನ ತುಂಬಬಹುದು ಎಂದು ತೋರಿಸಿಕೊಟ್ಟ ಅವರು ಇದೀಗ ನಿಧನರಾಗಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಫೆ.4 ರ ಸಂಜೆ ಚಿಕ್ಕಪುತ್ತೂರು ರುದ್ರಭೂಮಿಯಲ್ಲಿ ನಡೆಸಲಾಗುವುದು ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here