ರಾಮಕುಂಜ: ಕೊಯಿಲ ಗ್ರಾಮದ ಕೊನೆಮಜಲುಗುತ್ತು ಶ್ರೀ ದೇವಿ ಉಳ್ಳಾಲ್ತಿ ಉಳ್ಳಾಕುಲು ಹಾಗೂ ಸಹ ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ 12ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಫೆ.5ರಂದು ನಡೆಯಿತು.
![](https://puttur.suddinews.com/wp-content/uploads/2025/02/konemajalu-2.jpg)
ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಕೆಮ್ಮಿಂಜೆ ಹಾಗೂ ವೇದಮೂರ್ತಿ ವೆಂಕಟ್ರಮಣ ಕುದ್ರೆತ್ತಾಯರ ಉಪಸ್ಥಿತಿಯಲ್ಲಿ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ನವಕ ಕಲಶ ತಂಬಿಲ, ಆಶ್ಲೇಷ ಬಲಿ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
![](https://puttur.suddinews.com/wp-content/uploads/2025/02/konemajalu-3.jpg)
ಆಡಳಿತ ಸಮಿತಿ ಅಧ್ಯಕ್ಷ ದಯಾನಂದ ದಾಸ್ ಪಾಣಿಗ, ಕಾರ್ಯದರ್ಶಿ ಕೆ.ಸಂಜೀವ ಗೌಡ ಕೊನೆಮಜಲು, ಸದಸ್ಯರಾದ ವಿನೋದರ ಮಾಳ, ಬಾಲಕೃಷ್ಣ ಶೆಟ್ಟಿ, ರಾಮಣ್ಣ ಗೌಡ ಪಾಣಿಗ, ವಿಶ್ವನಾಥ ಗೌಡ ಕೊನೆಮಜಲು, ಗ್ರಾಮಸ್ಥರು ಪಾಲ್ಗೊಂಡಿದ್ದರು.
![](https://puttur.suddinews.com/wp-content/uploads/2025/02/konemajalu-4-1.jpg)