ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕಡಬ ಇದರ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇದರ ಮೇಲ್ಚಾವಣಿ ದುರಸ್ತಿಗಾಗಿ ಶ್ರೀ ಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ರೂ. 75000 ಸಹಾಯ ಧನ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಮಂಜೂರಾತಿ ಪತ್ರವನ್ನು ಕಡಬ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಅಧ್ಯಕ್ಷ, ನ್ಯಾಯವಾದಿ ಮಹೇಶ್ ಕೆ ಸವಣೂರು ರವರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ನಿಂಗರಾಜುರವರಿಗೆ ಹಸ್ತಾಂತರ ಮಾಡಿದರು.
ಸಭೆಯಲ್ಲಿ ಸವಣೂರು ವಲಯ ಮೇಲ್ವಿಚಾರಕರಾದ ವೀಣಾ ಕೆ, ಸೇವಾ ಪ್ರತಿನಿಧಿ ಮೀನಾಕ್ಷಿ ಡಿ, ಒಕ್ಕೂಟದ ಪದಾಧಿಕಾರಿಗಳಾದ ಮೀನಾಕ್ಷಿ ಬಾರಿಕೆ, ಶಿಕ್ಷಕರಾದ ಶಶಿಕಲಾ ಟಿ, ಓಬಲೇಶ್, ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.