ರಾಮಕುಂಜ: ಶ್ರೀ ರಾಮಕುಂಜೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆ ಬಳಿಕ ದೈವಗಳ ನೇಮೋತ್ಸವ ಫೆ.14 ಮತ್ತು 15ರಂದು ನಡೆಯಿತು.
ಫೆ.14ರಂದು ರಾತ್ರಿ ಕಲೆಂಬಿತ್ತಾಯ, ಕಲ್ಲುರ್ಟಿ, ಅಂಗಣ ಪಂಜುರ್ಲಿ ದೈವಗಳ ನೇಮ ನಡೆಯಿತು. ಫೆ.15ರಂದು ಬೆಳಿಗ್ಗೆ ಶ್ರೀ ಶಿರಾಡಿ, ರುದ್ರಚಾಮುಂಡಿ, ಗಿಳಿರಾಮ, ಗುಳಿಗ ದೈವಗಳ ನೇಮ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗುರುಪ್ರಸಾದ ರಾಮಕುಂಜ, ಸದಸ್ಯರೂ ಆದ ಅರ್ಚಕ ಅನಂತ ಉಡುಪ, ಸದಸ್ಯರಾದ ಕರುಣಾಕರ ಯು.ದೊಡ್ಡ ಉರ್ಕ, ಗುರುವಪ್ಪ ಕುಂಡಾಜೆ, ಶೈಲಜಾ ಬಿ.ಆಳ್ವ ಗುತ್ತುಮನೆ, ಪುಷ್ಪಾವತಿ ಜಯಪ್ರಕಾಶ್ ಬಾರಿಂಜ, ಜಗದೀಶ ಶೆಟ್ಟಿ ಅಂಬಾಬೀಡು, ಮಹೇಶ್ ಬಿ.ಬಾಂತೊಟ್ಟು, ಜಗದೀಶ್ ಎ.ಅಜ್ಜಿಕುಮೇರು, ಉತ್ಸವ ಸಮಿತಿ ಅಧ್ಯಕ್ಷ ಮಾಧವ ಆಚಾರ್ಯ ಇಜ್ಜಾವು, ಕಾರ್ಯದರ್ಶಿ ಸತೀಶ್ ಭಟ್ ಎಂ., ಉಪಾಧ್ಯಕ್ಷರಾದ ನಾರಾಯಣ ಭಟ್ ತೋಟ, ಸೇಸಪ್ಪ ರೈ ಬಾಂತೊಟ್ಟು, ರಾಧಾಕೃಷ್ಣ ಕೆ.ಎಸ್., ದಿವಾಕರ ರಾವ್ ಪಂಚವಟಿ, ಧರ್ಮಪಾಲ ರಾವ್ ಕಜೆ, ರಾಮ ಭಟ್ ಬೃಂದಾವನ, ತಿಮ್ಮಪ್ಪ ಗೌಡ ಆನ ಹಾಗೂ ಉತ್ಸವ ಸಮಿತಿ ಸದಸ್ಯರು ಸೇರಿದಂತೆ ನೂರಾರು ಮಂದಿ ಭಕ್ತರು ಪಾಲ್ಗೊಂಡಿದ್ದರು.
