ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆವರಣದ ಸುತ್ತಮುತ್ತ ಸ್ವಚ್ಛತೆ ಹಾಗೂ ಅಪಾಯಕಾರಿ ಮರಗಳ ತೆರವು ಕೆಲಸವನ್ನು ಶ್ರಮದಾನದ ಮೂಲಕ ನಡೆಸಲಾಯಿತು.

ಶ್ರಮದಾನದ ನಂತರ ಮಾಸಿಕ ಸಭೆಯನ್ನು ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರತಿನಿಧಿ ರಮೇಶ್ ಬಾಣಜಾಲು ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಮೇಲ್ವಿಚಾರಕ ಆನಂದ ಡಿ.ಬಿ.ಯವರು ಶೌರ್ಯ ಸ್ವಯಂ ಸೇವಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುಬ್ರಹ್ಮಣ್ಯ ಶಬರಾಯ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸತೀಶ್ ಕೆ.ಎಸ್.ದುರ್ಗಾಶ್ರೀ ನೆಲ್ಯಾಡಿ, ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಜೆ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು. ಶೌರ್ಯ ಘಟಕದ ಸ್ವಯಂ ಸೇವಕರು ಸಭೆಯಲ್ಲಿ ಭಾಗವಹಿಸಿದ್ದರು. ಶೌರ್ಯ ಘಟಕ ಸಂಯೋಜಕಿ ನಮಿತಾ ಎಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಶೌರ್ಯ ಸ್ವಯಂ ಸೇವಕರಾದ ಕುಸುಮ ಕೆ ವಂದಿಸಿದರು.
