ಜೆಸಿಐ ಪುತ್ತೂರು ವತಿಯಿಂದ ಎನ್.ಎಸ್.ಎಸ್ ಶಿಬಿರದಲ್ಲಿ ಸರಕಾರಿ ಉದ್ಯೋಗ ನೇಮಕಾತಿಗಳ ಬಗ್ಗೆ ಮಾಹಿತಿ ಕಾರ್ಯಗಾರ

0

ವ್ಯಕ್ತಿತ್ವ ವಿಕಸನ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಜೆಸಿಐ ಇದರ ಪುತ್ತೂರು ಘಟಕದ ವತಿಯಿಂದ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಸಾಜ ಪುತ್ತೂರು ಇಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಆಶ್ರಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ, ವಾರ್ಷಿಕ ಶಿಬಿರ 2024-25ರಲ್ಲಿ ಡಿಜಿಟಲ್ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.


ತರಬೇತಿ ಕಾರ್ಯಕ್ರಮವನ್ನು ಜೆಸಿಐ ಪುತ್ತೂರು ಅಧ್ಯಕ್ಷರು ಹಾಗೂ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಜೆಸಿ ಭಾಗ್ಯೇಶ್ ರೈ ನಡೆಸಿಕೊಟ್ಟರು. ಗುಮಾಸ್ತ ಹುದ್ದೆಯಿಂದ ಐ.ಎ.ಎಸ್ ವರೆಗಿನ ಮತ್ತು ಭಾರತೀಯ ಸೇನೆ, ಪೊಲೀಸ್ ಇತ್ಯಾದಿ ಸಶಸ್ತ್ರ ಪಡೆಗಳ ನೇಮಕಾತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಲಾಯಿತು. ಎನ್.ಎಸ್.ಎಸ್ ವಿದ್ಯಾರ್ಥಿಗಳು ಭಾಗ್ಯೇಶ್ ರೈ ರವರೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಉಪನ್ಯಾಸಕರು, ಎನ್.ಎಸ್.ಎಸ್ ಪ್ರೋಗ್ರಾಮ್ ಆಫೀಸರ್ ಆಗಿರುವ ಡಾ.ಜ್ಯೋತಿ ಪಿ .ಎಸ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಶೇಸಪ್ಪ, ಉಪನ್ಯಾಸಕರಾದ ಮಾಳವಿಕ ಬಲ್ಮಿ, ದ. ಕ . ಜಿ ಪಂ. ಹಿರಿಯ ಪ್ರಾಥಮಿಕ ಶಾಲೆ ಸಾಜ ಇಲ್ಲಿಯ ಎಸ್ .ಡಿ .ಎಂ. ಸಿ ಅಧ್ಯಕ್ಷರಾದ ಸುಧಾಕರ್ ನಾಯಕ್ ಹಂಸತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಸಾರ್ಯ ಒಕ್ಕೂಟ ಇದರ ಅಧ್ಯಕ್ಷರಾದ ಭಾಸ್ಕರ್ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎನ್.ಎಸ್.ಎಸ್ ಶಿಬಿರಾರ್ಥಿ ಗುರುಪ್ರಸಾದ್ ನಿರೂಪಿಸಿದರು.

LEAVE A REPLY

Please enter your comment!
Please enter your name here