ಬಂಟ್ವಾಳ: ಖೋಟಾ ನೋಟು ಚಲಾವಣೆ ಆರೋಪ – ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ವಿಟ್ಲ: ಲಕ್ಷಾಂತರ ರೂಪಾಯಿ ಖೋಟಾ ನೋಟು ಚಲಾವಣೆಗೆ ಬಂದು ಪೋಲೀಸರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಪೋಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2024 ರಲ್ಲಿ ಬಿಸಿರೋಡಿನ ಪೇಟೆಯ ಅಂಗಡಿಗಳಲ್ಲಿ ಖೋಟಾ ನೋಟನ್ನು ಚಲಾವಣೆಗೆ ತಂದವರ ಪೈಕಿ ಕೇರಳ ನಿವಾಸಿಗಳಾದ ಮಹಮ್ಮದ್ ಸಿ.ಎ.ಮತ್ತು ಖಮರುನ್ನೀಶ ರವರು ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಈ ಪೈಕಿ ಓರ್ವ ಆರೋಪಿ ಪರಾರಿಯಾಗಿದ್ದ.
ಇದೀಗ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕಾಸರಗೋಡು ಚೆಂಗಳ ನಿವಾಸಿ ಶರೀಫ್ ಪಿ.ಎ.ರವರನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ತಂಡ ಕಾರಿನಲ್ಲಿ ಬಂದು ಅಂಗಡಿಗಳಲ್ಲಿ 500 ರೂಪಾಯಿ ಮುಖ ಬೆಲೆಯ ಖೋಟಾ ನೋಟುಗಳನ್ನು ಬಹಳ ನಾಜೂಕಾಗಿ ಚಲಾವಣೆ ಮಾಡುತ್ತಿದ್ದರು. ಕಡಿಮೆ ಬೆಲೆಯ ಸಾಮಾಗ್ರಿಗಳನ್ನು ಪಡೆದು ಚಿಲ್ಲರೆ ಹಣವನ್ನು ಪಡೆದು ನಕಲಿ ಹಣವನ್ನು ಅಸಲಿಯಾಗಿ ಪರಿವರ್ತನೆ ಮಾಡಿ ಹೊರಟು ಹೋಗುತ್ತಿದ್ದರು.
ಆದರೆ ಇವರ ಅಸಲಿ ಕಥೆಯ ಬಗ್ಗೆ ಅಂಗಡಿಯ ಮಾಲಕರುಗಳಿಗೆ ಸಂಶಯ ಬಂದು ಪೋಲೀಸರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಮತ್ತು ಎಸ್.ಐ.ರಾಮಕೃಷ್ಣ ಅವರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.


ಪೋಲಿಸರ ದಾಳಿಯ ವೇಳೆ ಪ್ರಕರಣದ ಸೂತ್ರದಾರ ಶರೀಫ್ ತಲೆಮರೆಸಿಕೊಂಡಿದ್ದ. ಇದೀಗ ಕಾಸರಗೋಡಿನ ವಿದ್ಯಾನಗರದಲ್ಲಿ ಈತನನ್ನು ಖಚಿತವಾದ ಮಾಹಿತಿ ಮೇಲೆ ಬಂಧನ ಮಾಡಲಾಗಿದೆ.
ಮೂವರ ಮೇಲೆ ಕೂಡ ಖೋಟಾ ನೋಟು ಚಲಾವಣೆ ಮಾಡುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಖೋಟಾ ನೋಟು ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಬಂಧನವಾಗದೆ ತಲೆಮರೆಸಿಕೊಂಡಿದ್ದು ಈತ ವಾರೆಂಟ್ ಆರೋಪಿಯಾಗಿದ್ದ. ಹಿರಿಯ ಪೋಲೀಸ್ ಅಽಕಾರಿಗಳ ಮಾರ್ಗದರ್ಶನದಂತೆ ಬಂಟ್ವಾಳ ನಗರ ಠಾಣಾ ಪೋಲೀಸರಾದ ಸುಜು, ಜಗದೀಶ್, ಕೃಷ್ಣಕುಲಾಲ್, ಇರ್ಷಾದ್ ರವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here