ಪ್ರವಾಸೋದ್ಯಮ ಕ್ಷೇತ್ರವಾಗಿ ಗೆಜ್ಜೆಗಿರಿಯನ್ನು ಅಭಿವೃದ್ದಿಪಡಿಸುವಂತೆ ಶಾಸಕ ಅಶೋಕ್ ರೈ ಮನವಿ-ಸರಕಾರದಿಂದ ಸ್ಪಂದನೆ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನ ಬಿತ್ತಿಲನ್ನು ಪ್ರವಾಸೋದ್ಯಮ ಕೇಂದ್ರವಾಗಿಸಬೇಕೆಂದು ಪುತ್ತೂರು ಶಾಸಕರ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ. ಶಾಸಕರ ಆಗ್ರಹಕ್ಕೆ ಸರಕಾರ ಮುಂದಿನ ಬಜೆಟ್ ಅಧಿವೇಶನಕ್ಕೆ ಮೊದಲು ಕ್ಷೇತ್ರಕ್ಕೆ ಅನುದಾನವನ್ನು ಬಿಡುಗಡೆ ಮಾಡಿ ಅಭಿವೃದ್ದಿ ಮಾಡಲಾಗುವುದು ಎಂದು ಪ್ರವಾಸೋದ್ಯಮ‌ ಸಚಿವ ಎಚ್ ಕೆ ಪಾಟೀಲ್ ಭರವಸೆ ನೀಡಿದ್ದಾರೆ.


ಗೆಜ್ಜೆಗಿರಿ ನಂದನ ಬಿತ್ತಿಲು ಕೋಟಿ ಚೆನ್ನಯ ವೀರ ಪುರುಷರ ಐತಿಹಾಸಿಕ ಕ್ಷೇತ್ರವಾಗಿದೆ. ಲಕ್ಷಾಂತರ ಮಂದಿ ಭಕ್ತಾಧಿಗಳು ಇಲ್ಲಿಗೆ ನಾನಾ ಜಿಲ್ಲೆಗಳಿಂದ ಆಗಮಿಸುತ್ತಿದ್ದಾರೆ. ನೂರಾರು ವರ್ಷಗಳ ಐತಿಹ್ಯ ಹೊಂದಿರುವ ಈ ಕ್ಷೇತ್ರವನ್ನು ಪ್ರವಾಸೋಧ್ಯಮ ಕೇಂದ್ರವಾಗಿ ಮಾರ್ಪಾಡು ಮಾಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಇದರ ಜೊತೆಗೆ ಪುತ್ತೂರಿನ ಬಿರುಮಲೆ ಬೆಟ್ಟವನ್ನೂ ಅಭಿವೃದ್ದಿ ಮಾಡುವಂತೆ ಮತ್ತು ಈಗಾಗಲೇ ಬಿರುಮಲೆ ಬೆಟ್ಟ ಅಭಿವೃದ್ದಿಗೆ ಎರಡು ಕೋಟಿ ಅನುದಾನ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ ಅನುದಾನದ ಬೇಡಿಕೆಯನ್ನು‌ ಶಾಸಕರು ಸರಕಾರದ‌ ಮುಂದೆ ಸಲ್ಲಿಸಿದರು.

LEAVE A REPLY

Please enter your comment!
Please enter your name here