ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ವಿವಿಧ ಪರಿಹಾರ ಕಾರ್ಯಕ್ರಮಗಳು ಮಾ.8 ರಿಂದ 14ರ ತನಕ ನಡೆಯಲಿದೆ.
ಮಾ.8 ರಂದು ಸಂಜೆ 6 ರಿಂದ ಅಘೋರ ಹೋಮ, ಬಾದೋಚ್ಚಾಟನೆ, ವನದುರ್ಗಾಹೋಮ. ಮಾ.೯ಕ್ಕೆ ಬೆಳಿಗ್ಗೆ ಗಂಟೆ ೮ಕ್ಕೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಹೋಮ, ನವಗ್ರಹ ಶಾಂತಿಹೋಮ, ಮೃತ್ಯುಂಜಯ ಹೋಮ, ಸಂಜೆ ಗಂಟೆ ೪ ರಿಂದ ದುರ್ಗಾಪೂಜೆ, ರಾತ್ರಿ ಗಂಟೆ ೮ಕ್ಕೆ ದೈವ ತಂಬಿಲ, ಮಾ.೧೦ಕ್ಕೆ ಬೆಳಿಗ್ಗೆ ಗಂಟೆ ೭.೩೦ ರಿಂದ ಪವಮಾನ ಹೋಮ, ಭೂ ವರಾಹ ಶಾಂತಿ, ತಿಲಹೋಮ, ಹಾಗು ಮಾ.೧೧ಕ್ಕೆ ಸರ್ಪಸಂಸ್ಕಾರ, ಮಾ.೧೪ಕ್ಕೆ ಬೆಳಿಗ್ಗೆ ಪಂಚಗವ್ಯ, ಪುಣ್ಯಾರ್ಚನೆ, ಆಶ್ಲೇಷ ಬಲಿ, ಬ್ರಹ್ಮಚಾರಿ ಆರಾಧನೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಪ್ರಸಾದ ಸ್ವೀಕರಿಸಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರುಗಳು ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ವಿನಂತಿಸಿದ್ದಾರೆ.