ಬಡಗನ್ನೂರು: ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದ ವಾರ್ಷಿಕ ನೇಮೋತ್ಸವದ ಅಂಗವಾಗಿ ಮಾ.9ರಂದು ಬೆಳಿಗ್ಗೆ ಗಂಟೆ 7ಕ್ಕೆ ಪೆರ್ಲಂಪ್ಪಾಡಿ ಕೊರ್ಮಡ್ಕ ಶಿವರಾಮ ಹೊಳ್ಗಳ ನೇತೃತ್ವದಲ್ಲಿ ಗಣಪತಿಹೋಮ ನೆರವೇರಿತು.
ಭಜನಾ ಕಾರ್ಯಕ್ರಮ:-
ಭಜನಾ ಕಾರ್ಯಕ್ರಮದಲ್ಲಿ ಸ್ವಾಮಿ ಕೊರಗಜ್ಜ ಬಾಲ ಭಜನಾ ಸಂಘ ಶಬರಿನಗರ, ಸುಳ್ಯಪದವು,ಶ್ರೀ ಹರೀ ನಾಮಾಮೃತ ಮಕ್ಕಳ ಭಜನಾ ತಂಡ ಮರದಮೂಲೆ, ಶ್ರೀ ಮಹಾಲಕ್ಷ್ಮೀ ಮಹಿಳಾ ಭಜನಾ ಮಂಡಳಿ ಸುಳ್ಯಪದವು, ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಸುಳ್ಯಪದವು, ಶ್ರೀ ಮಹಾವಿಷ್ಣು ಭಜನಾ ಸಂಘ ಸುಳ್ಯಪದವು, ಶ್ರೀ ಅಯ್ಯಪ್ಪ ಭಜನಾ ಮಂದಿರ ಸುಳ್ಯಪದವು ತಂಡದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು.