ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 9 ರಂದು ಬಾಪೂ ಸಭಾಂಗಣ ಗಾಂಧಿ ಭವನ ಬೆಂಗಳೂರಿನಲ್ಲಿ ಚೇತನ ಫೌಂಡೇಶನ್ ಕರ್ನಾಟಕ ಸೋಶಿಯಲ್ ಕ್ಲಬ್ ಆಶ್ರಯದಲ್ಲಿ ನಡೆದ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಅಕ್ಷತಾ ನಾಗನಕಜೆ ಅವರ ಸಾಹಿತ್ಯ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಚೇತನ ಫೌಂಡೇಶನ್ ಕ್ಲಬ್ ನ ಅಧ್ಯಕ್ಷರಾದ ಚಂದ್ರಶೇಖರ ಮಾಡಲಗೇರಿ ಅವರು ಗಣ್ಯರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ವನಿತಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಅಕ್ಷತಾ ನಾಗನಕಜೆ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಪಂಚೋಡಿ ದಯಾನಂದ ಗೌಡ ರ ಪತ್ನಿ.