ಪುತ್ತೂರು:1972 ಮತ್ತು 1978 ಈ ಎರಡು ಅವಧಿಯಲ್ಲಿ ಸುರತ್ಕಲ್ ಶಾಸಕರಾಗಿ, ಮುಖ್ಯಮಂತ್ರಿ ದೇವರಾಜ್ ಅರಸು ಅವರ ಕ್ಯಾಬಿನೆಟ್ ನಲ್ಲಿ ಭೂ ಸುಧಾರಣಾ ಸಚಿವರಾಗಿ , ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಬಂಟ್ವಾಳ ತಾಲೂಕಿನ ಬಾಕ್ರಬೈಲು ನಿವಾಸಿ, ಮಾಜಿ ಸಚಿವ ಬಿ. ಸುಬ್ಬಯ್ಯ ಶೆಟ್ಟಿ(91.ವ)ಅವರು ಮಾ.10 ರಂದು ಬೆಂಗಳೂರಿನ ಸ್ವಗೃಹದಲ್ಲಿ
ನಿಧನರಾಗಿದ್ದಾರೆ.
ತನ್ನ ವಿದ್ಯಾಭ್ಯಾಸವನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಡೆದಿರುವ ಇವರು ಆ ಬಳಿಕ ಕಾನೂನು ಪದವಿಯನ್ನು ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ
ಪಡೆದುಕೊಂಡಿದ್ದರು. ನಂತರ ಸಿ.ಬಿ.ಐ ಹುದ್ದೆಗೆ ನೇಮಕಗೊಂಡು ಕಾಶ್ಮೀರ ಮತ್ತು ಲಡಾಖ್ ನಲ್ಲಿ ಸೇವೆಯನ್ನು ಸಲ್ಲಿಸಿದ್ದರು. ನಂತರ ಕಾರಣಾಂತರಗಳಿಂದ ಸಿ.ಬಿ.ಐ ಹುದ್ದೆಯನ್ನು ತ್ಯಜಿಸಿದ್ದ ಇವರು ಕಾನೂನು ಸೇವೆಯನ್ನು ಸಲ್ಲಿಸಿದ್ದರು.
ಬಳಿಕ ಸಾರ್ವಜನಿಕ ಸೇವೆಗೆ ತನ್ನನ್ನು ತಾನು ತೊಡಗಿಸಿಕೊಂಡ ಇವರು ಶಾಸಕರಾಗಿ , ಸಚಿವರಾಗಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಇವರ ಸಾಧನೆಗೆ ಡಿ.ದೇವರಾಜ ಅರಸ್ ಪ್ರಶಸ್ತಿ , ಶಾಂತವೆರಿ ಗೋಪಾಲ ಅವಾರ್ಡ್ ಮತ್ತು ಡಾ| ದ.ರಾ ಬೇಂದ್ರೆ ಈ ಮೊದಲಾದ ಪ್ರಶಸ್ತಿಗಳು ಸಂದಿವೆ. ಮೃತರು ಮಕ್ಕಳಾದ ಉಮಾ ಸವಣೂರು ಮತ್ತು ರೇಷ್ಮಾ ಸವಣೂರು ಸಹಿತ ಅಳಿಯಂದರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.