ಆರ್ಯಾಪು: ದನದ ಕೊಟ್ಟಿಗೆಗೆ ಬೆಂಕಿ : ಅಪಾರ ನಷ್ಟ

0

ಪುತ್ತೂರು: ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು ಹಾನಿಯಾದ ಘಟನೆ ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನಲ್ಲಿ ಭಾನುವಾರ ಸಂಜೆ ನಡೆದಿದೆ.

ಮೋಹನ್ ಭಂಡಾರಿ ಎಂಬವರ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡು ಹಾನಿಯಾಗಿದ್ದು, ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಮನೆ ಪಕ್ಕದಲ್ಲೇ ಇದ್ದ ಕೊಟ್ಟಿಗೆಗೆ ಬೆಂಕಿ ಹತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ದನಗಳನ್ನು ಹೊರ ಕರೆದೊಯ್ದಿದ್ದಾರೆ.

LEAVE A REPLY

Please enter your comment!
Please enter your name here