ಪುತ್ತೂರು: ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ಕ್ಷೇತ್ರ ಮಧೂರು ಇಲ್ಲಿನ ಬ್ರಹ್ಮ ಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವೈಷ್ಣವಿ ನಾಟ್ಯಾಲಯ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ಜರುಗಿತು.

ಹಿಮ್ಮೇಳದಲ್ಲಿ ನಟುವಾಂಗ ಮತ್ತು ನೃತ್ಯ ನಿರ್ದೇಶನ ಯೋಗೀಶ್ವರಿ ಜಯಪ್ರಕಾಶ್ ಹಾಡುಗಾರಿಕೆಯಲ್ಲಿ ವೆಳ್ಳಿಕ್ಕೋತ್ ವಿಷ್ಣುಭಟ್,ವಸಂತಕುಮಾರ ಗೋಸಾಡ ಮೃದಂಗದಲ್ಲಿ ಕಣ್ಣನ್ ನೀಲೇಶ್ವರ, ಕೊಳಲಿನಲ್ಲಿ ರಾಜಗೋಪಾಲ್ ನೀಲೇಶ್ವರ ಸಹಕರಿಸಿದರು. ಪ್ರಸಾದನದಲ್ಲಿ ಭಾವನಾ ಕಲಾ ಆರ್ಟ್ಸ್ ಪುತ್ತೂರು ಸಹಕರಿಸಿದರು.
