ನೆಲ್ಯಾಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಸರ್ಕಾರಿ ಪದವಿ ಕಾಲೇಜುಗಳ ಆಹ್ವಾನಿತ ಲೀಗ್ ಮಾದರಿ ಕಬಡ್ಡಿ ಪಂದ್ಯಾಟದಲ್ಲಿ ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ನೆಲ್ಯಾಡಿ ವಿವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ಮನೀಷ್ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿ ಪಡೆದಿದ್ದಾರೆ. ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ರವರ ಮಾರ್ಗದರ್ಶನದಲ್ಲಿ ವಿವಿ ಕಾಲೇಜು ನೆಲ್ಯಾಡಿಯ ದೈಹಿಕ ಶಿಕ್ಷಣ ನಿರ್ದೇಶಕ ಪಾವನಕೃಷ್ಣರವರು ತರಬೇತಿ ನೀಡಿದ್ದಾರೆ.