ಕಾಣಿಯೂರು: ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ

0

ಕಾಣಿಯೂರು: ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 134ನೇ ಜನ್ಮ ದಿನವನ್ನು ಆಚರಿಸಲಾಯಿತು.ಪುತ್ತೂರು ತಾ.ಪಂ. ಮಾಜಿ ಉಪಾಧ್ಯಕ್ಷ ಬಾಬು ಮಾದೋಡಿ ಅಂಬೇಡ್ಕರ್ ರವರ ಜೀವನದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಬೆಳಂದೂರು ಗ್ರಾ. ಪಂ. ಉಪಾಧ್ಯಕ್ಷ ಜಯಂತ ಅಬೀರ, ಕಾಣಿಯೂರು ಹಿ. ಪ್ರಾ. ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಪರಮೇಶ್ವರ ಅನಿಲ, ಶ್ರ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಯುವಕ ಮಂಡಲದ ಗೌರವಾಧ್ಯಕ್ಷ ಸುರೇಶ್ ಓಡಬಾಯಿ, ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಮುಗರಂಜ, ವಿನಯ್ ಎಲುವೆ, ಕೀರ್ತಿಕುಮಾರ್ ಎಲುವೆ, ಕಿಶನ್ ಕಾಣಿಯೂರು ಉಪಸ್ಥಿತರಿದ್ದರು. ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ ಸ್ವಾಗತಿಸಿ, ಕಾಣಿಯೂರು ಗ್ರಾ. ಪಂ. ಸದಸ್ಯ ವಸಂತ ಪೆರ್ಲೋಡಿ ವಂದಿಸಿದರು.

LEAVE A REPLY

Please enter your comment!
Please enter your name here