ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಜೀರ್ಣೋದ್ದಾರದ ಬಗ್ಗೆ ಅನುಜ್ಞಾ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಮತ್ತು ನಾಗಶಿಲಾ ಪ್ರತಿಷ್ಠಾ ಕಲಶವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಎ.20 ಹಾಗೂ 21 ರಂದು ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳು ನಡೆಯಿತು.

ಎ.20 ರಂದು ಸಂಜೆ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾಬಲಿ, ರಾತ್ರಿ ಮಹಾಪೂಜೆ, ಅನ್ನಸಂತರ್ಪಣೆ, ಎ.21 ರಂದು ನಾಗನ ಮೂಲ ಸ್ಥಳದಲ್ಲಿ ಬೆಳಿಗ್ಗೆ ಮಹಾ ಗಣಪತಿ ಹೋಮ, ಅನುಜ್ಞಾ ಕಲಶ ಪೂಜೆ, ಅನುಜ್ಞಾ ಕಲಶಾಭೀಷೇಕ. ತಂಬಿಲ ಸೇವೆ, ಶ್ರೀ ಚಾಮುಂಡೇಶ್ವರಿ ಕಲ್ಲುರ್ಟಿ, ಗುಳಿಗ ದೈವಗಳ ಬಾಲಾಲಯ ಪ್ರತಿಷ್ಠೆ, ಪ್ರಸಾದ ವಿತರಣೆ ಇತ್ಯಾದಿ ಧಾರ್ಮಿಕ ಕಾರ್ಯಗಳು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ್ ರೈ ಮಿಶನ್ಮೂಲೆ, ಸತೀಶ್ ರೈ ಮಿಶನ್ಮೂಲೆ, ಅಧ್ಯಕ್ಷ ರಾಮ ಶೆಟ್ಟಿ, ಲೆಕ್ಕ ಪರಿಶೋಧಕ ವಿಶ್ವನಾಥ ರೈ ಮಿಶನ್ಮೂಲೆ, ಕಾರ್ಯದರ್ಶಿ ಕೆ.ಬಿ ಶೇಖರ, ಉಪಾಧ್ಯಕ್ಷ ಸಂತೋಷ್ ಕುಮಾರ್, ಸತೀಶ್ ಎಂ, ಜೊತೆ ಕಾರ್ಯದರ್ಶಿ ಲಕ್ಷ್ಮಣ ಶೆಟ್ಟಿ, ಸಂತೋಷ್ ರೈ, ಸುಂದರ ಕೆ. ಕೋಶಾಧಿಕಾರಿ ಮೋಹನ್ ಕುಮಾರ್ ಡಿ ಸಹಿತ ಹಲವರು ಭಕ್ತಾಧಿಗಳು ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದ್ದರು.
