ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿಸಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ-ದರ್ಬೆಯಿಂದ ಗಾಂಧಿಕಟ್ಟೆಯ ತನಕ ಪಾದಯಾತ್ರೆ

0

ಪುತ್ತೂರು: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಿಂದ 28 ಮಂದಿ ಮೃತಪಟ್ಟು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.

ಈ ಕುರಿತು ಭಯೋತ್ಪಾದಕರ ವಿರುದ್ಧ ಭಾರತೀಯರ ಆಕ್ರೋಶ ಮುಗಿಲು ಮುಟ್ಟಿದ್ದು, ಎ.23ರಂದು ಪುತ್ತೂರಿನಲ್ಲಿ ಮಾತೃಭೂಮಿ ಸಂರಕ್ಷಣಾ ವೇದಿಕೆ, ವಿಶ್ವಹಿಂದು ಪರಿಷದ್ ಬಜರಂಗದಳ ಮತ್ತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗು ವಿವಿಧ ಹಿಂದು ಸಂಘಟನೆಗಳ ನೇತೃತ್ವದಲ್ಲಿ ಪುತ್ತೂರು ದರ್ಬೆಯಿಂದ ಗಾಂಧಿಕಟ್ಟೆಗೆ ಪಾದಯಾತ್ರೆ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here