ಉಪ್ಪಿನಂಗಡಿ: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನ `ಮೈಕಾಲ ಟ್ರೋಲ್ಸ್’ ಎಂಬ ಹೆಸರಿನ ಖಾತೆಯಲ್ಲಿ ಇತ್ತೀಚೆಗೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ಯಾರೋ ಕಿಡಿಗೇಡಿಗಳು ಕೋಮುದ್ವೇಷವನ್ನುಂಟು ಮಾಡುವ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂದೇಶದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಜೂ.2ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 47/2025 ಕಲಂ: 353(2), 55 ಜೊತೆಗೆ 103 ಭಾರತೀಯ ನ್ಯಾಯ ಸಂಹಿತ 2023ರಂತೆ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.