ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ವತಿಯಿಂದ ಹಿಂದೂ ಸಮಾಜದ ಐಕ್ಯತೆಗಾಗಿ ಮತ್ತು ಕಲ್ಯಾಣಾರ್ಥವಾಗಿ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಜೂ.7ರಂದು ಸಂಜೆ 3ಕ್ಕೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಹಿಂದೂ ಪರ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪೂಜಾ ಸಮಿತಿಯ ಗೌರವಾಧ್ಯಕ್ಷ ಜಯಂತ ಪೊರೋಳಿ, ಅಧ್ಯಕ್ಷ ಶ್ರೀರಾಮ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿ ಚಿದಾನಂದ ಪಂಚೇರು, ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್ ಕೊಡಂಗೆ, ಸುಜೀತ್ ಬೊಳ್ಳಾವು, ಪ್ರಮುಖರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಧನಂಜಯ ನಟ್ಟಿಬೈಲು, ಮಹೇಂದ್ರ ವರ್ಮ ಪಡ್ಪು, ಲಕ್ಷ್ಮಣ ಗೌಡ ನೆಡ್ಚಿಲ್, ಕೈಲಾರು ರಾಜಗೋಪಾಲ ಭಟ್, ಪ್ರಶಾಂತ್ ನೆಕ್ಕಿಲಾಡಿ, ರಮೇಶ್ ಭಂಡಾರಿ, ಚಂದ್ರಶೇಖರ ಮಡಿವಾಳ, ಚಂದ್ರಶೇಖರ ರಾಮನಗರ ಮತ್ತಿತರರು ಉಪಸ್ಥಿತರಿದ್ದರು.