ನೆಲ್ಯಾಡಿ: 2024-25ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವತಿಯಿಂದ ಸನ್ಮಾನ ಕಾರ್ಯಕ್ರಮ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಸೆಬಾಸ್ಟಿಯನ್ ವಳ್ಳೋಪ್ಪಳ್ಳಿ ಸಭಾಂಗಣದಲ್ಲಿ ನಡೆಯಿತು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 617 ಅಂಕಗಳೊಂದಿಗೆ ರಾಜ್ಯಕ್ಕೆ ಎಂಟನೇ ರ್ಯಾಂಕ್ ವಿಜೇತ ಜೇಫಿನ್ ಜೋನ್ಸನ್ ಪುಳಿಕ್ಕಲ್, 612 ಅಂಕಗಳೊಂದಿಗೆ ಶ್ರೇಷ್ಠ ಸಾಧನೆ ಮಾಡಿದ ರೇಖಿಲ್ ರಾಜೇಶ್ರವರನ್ನು ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ಸನುಷ ಕೊಳಂಗರಾತ್, ಆಷ್ಟನ್ ತೆಕ್ಕೆಕ್ಕೂಟ್ಟ್ರವರನ್ನು ಸನ್ಮಾನಿಸಲಾಯಿತು. ಚರ್ಚ್ನ ಧರ್ಮಗುರು ರೆ.ಫಾ.ಶಾಜಿ ಮ್ಯಾಥ್ಯು ಅವರು ಶುಭಹಾರೈಸಿದರು. ವಿದ್ಯಾರ್ಥಿಗಳ ಪೋಷಕರು, ಚರ್ಚ್ನ ಸದಸ್ಯರು ಉಪಸ್ಥಿತರಿದ್ದರು.