ಗಡಿಪಾರು ನೋಟಿಸ್ ಹಿನ್ನೆಲೆ- ಪುತ್ತೂರು ಸಹಾಯಕ ಆಯುಕ್ತರ ಮುಂದೆ ವಕೀಲರ ಮೂಲಕ 8 ಮಂದಿ ವಿಚಾರಣೆಗೆ ಹಾಜರು

0

ಪುತ್ತೂರು ನಗರ ಮತ್ತು ಗ್ರಾಮಾಂತರದ 9 ಮಂದಿ ಸೇರಿದಂತೆ ದ.ಕ.ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಿಂದ ಒಟ್ಟು 36 ಮಂದಿಯನ್ನು ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆ ಪ್ರಾರಂಭವಾಗಿದ್ದು, ಪುತ್ತೂರು ನಗರ ಮತ್ತು ಗ್ರಾಮಾಂತರದ 8 ಮಂದಿ ಪರವಾಗಿ ವಕೀಲರು ಪುತ್ತೂರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್‌ ಕುಮಾರ್ ರವರ ಪರವಾಗಿ ವಕೀಲರು ವಾದಿಸಿದರು. ಜೂನ್ 27ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here