ಕಾಣಿಯೂರು: ಕುದ್ಮಾರು ಸ. ಉ. ಹಿ. ಪ್ರಾ ಶಾಲೆಯಲ್ಲಿ ಅವನಿ ಪರಿಸರ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ಏಕ್ ಪೇಡ್ ಮಾ ಕೆ ನಾಮ್ , ಪರಿಸರದ ಅವಶ್ಯಕತೆ, ಪರಿಸರ ಮಾಲಿನ್ಯದಿಂದ ಆಗುವ ತೊಂದರೆಗಳು, ಪರಿಸರದೊಂದಿಗಿನ ಮನುಷ್ಯನ ಬದುಕು ವಿಷಯದ ಕುರಿತು ಮುಖ್ಯಗುರುಗಳಾದ ಶ್ರೀಲತಾ ರವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಪರಿಸರದ ಸಂಬಂಧಿಸಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆಯನ್ನು ಮಾಡಲಾಯಿತು.
ವಿದ್ಯಾರ್ಥಿಗಳು ತಂದಿರುವ ವಿವಿಧ ಸಸಿಗಳನ್ನು ನೆಡುವುದರ ಮೂಲಕ ದಿನದ ಮಹತ್ವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.