ನೆಲ್ಯಾಡಿ: ಪಡುಬೆಟ್ಟು ಉಳಿತ್ತೊಟ್ಟು ಬಿಲಾಲ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಮುಸ್ಲಿಂ ಬಾಂಧವರು ಪರಸ್ಪರ ಆಲಿಂಗಿಸಿ ಬಕ್ರೀದ್ ಹಬ್ಬದ ಶುಭಾಶಯ ಹಂಚಿಕೊಂಡರು. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್ ಸಹಿತ ಹಲವು ಮಂದಿ ಬಕ್ರೀದ್ ಆಚರಣೆಯಲ್ಲಿ ಪಾಲ್ಗೊಂಡಿದ್ದರು.