ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆ, ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿರುವ ಕೆ.ಎಂ.ಸಿ. ಆಸ್ಪತ್ರೆ ಯ ಘಟಕದಿಂದ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಗಾರವು ನಡೆಯಿತು.
ಮನೆಯಲ್ಲಿ, ಶಾಲೆಯಲ್ಲಿ ಅಥವಾ ಹೊರ ಪರಿಸರದಲ್ಲಿ ಅನೇಕ ವಿಧವಾದ ಅಪಘಾತಗಳು ಆಗುವ ಸಂಭವವಿರುತ್ತದೆ. ಅಂತಹ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾದವರಿಗೆ ಪ್ರಥಮ ಚಿಕಿತ್ಸೆ ಅವಶ್ಯಕವಾಗಿರುತ್ತದೆ ಹಾಗೂ ಪ್ರಥಮ ಚಿಕಿತ್ಸೆಯಿಂದ ಅಪಘಾತದ ತೀವ್ರತೆಯನ್ನು ಕಡಿಮೆ ಮಾಡಬಹುದು. ಹಾವು ಕಚ್ಚಿದಾಗ, ನೀರಿನಲ್ಲಿ ಮುಳುಗಿದಾಗ, ಪ್ರಾಣಿಗಳು ಕಚ್ಚಿದಾಗ, ಸುಟ್ಟ ಗಾಯಗಳಾದಾಗ, ಪ್ರಜ್ಞೆ ತಪ್ಪಿದಾಗ ಇಂತಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಹಾಗೂ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ವಿವರವಾಗಿ ಡಾ. ಮೋಹನ್ ರವರು ತಿಳಿಯಪಡಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಎ, ವಿವೇಕಾನಂದ ಇಂಜಿನಿಯರ್ ಕಾಲೇಜ್ ಎಂಬಿಎ ವಿದ್ಯಾರ್ಥಿ ಹರ್ಷ ಕೆ, ಸಹಾಯಕರಾದ ಜಿತೇಶ್ ಡಿ’ಸೋಜಾ, ನಿತೇಶ್ ಆಂಬ್ಯುಲೆನ್ಸ್ ಡ್ರೈವರ್ ಕೆ.ಎಂ.ಸಿ.ಆಸ್ಪತ್ರೆ ಹಾಗೂ ಶಾಲಾ ಶಿಕ್ಷಕ/ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.